1 ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.
2 ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು.
3 ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು.
4 ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.
5 ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.
6 ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು.
7 ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು.
8 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ,
9 ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ.
10 ಯೆಹೋವನ ಪರಿಶುದ್ಧನಾಮದಲ್ಲಿ ಹಿಗ್ಗಿರಿ;
11 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ;
12 ಆತನ ಸೇವಕನಾದ ಇಸ್ರೇಲನ ಸಂತತಿಯವರೇ,
13 ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ
14 ಯೆಹೋವನೇ ನಮ್ಮ ದೇವರು.
15 ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ.
16 ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ.
17 ಯೆಹೋವನು ಯಾಕೋಬನಿಗೆ ಕಟ್ಟಳೆಗಳನ್ನು ಅನುಗ್ರಹಿಸಿದನು.
18 ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು.
19 ಆತನು “ನಿಮಗೆ ಈ ದೇಶವನ್ನು ಕೊಡುವೆನು;
20 ಅವರು ಒಂದು ದೇಶದಿಂದ ಇನ್ನೊಂದಕ್ಕೂ
21 ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ.
22 ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ;
23 ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ;
24 ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
25 ಯೆಹೋವನು ದೊಡ್ಡವನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ.
26 ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ.
27 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ
28 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ
29 ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ.
30 ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು!
31 ಭೂಮ್ಯಾಕಾಶಗಳು ಹರ್ಷಿಸಲಿ! “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ”
32 ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ,
33 ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ.
34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ.
35 “ರಕ್ಷಕನಾದ ಯೆಹೋವನೇ,
36 ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ;
37 ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.
38 ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು.
39 ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.
40 ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.
43 ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು.