1 ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.
2 “ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”
3 ಇಬ್ಬರು ಒಟ್ಟಾಗಿ ನಡೆಯಬೇಕಾದರೆ
4 ಅಡವಿಯಲ್ಲಿರುವ ಸಿಂಹವು
5 ಬಲೆಯಲ್ಲಿ ಆಹಾರ ಹಾಕದಿದ್ದರೆ
6 ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು
7 ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.
8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.
11 ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”
12 ಯೆಹೋವನು ಹೇಳುವುದೇನೆಂದರೆ,
13 ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.
14 ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನೂ ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.
15 ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.