Ezequiel 17

KAN2010

1 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,

2 “ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.

3 ಅವರಿಗೆ ಹೀಗೆ ಹೇಳು, ದೇವರಾದ ಯೆಹೋವನು ಹೀಗೆನ್ನುತ್ತಾನೆ:

4 ಆ ಹದ್ದು ದೇವದಾರು ಮರದ (ಯೆಹೂದದ ರಾಜನಾದ ಯೆಹೋಯಾಖೀನ್) ಮೇಲ್ಭಾಗವನ್ನು ಮುರಿದುಬಿಟ್ಟಿತು.

5 ನಂತರ ಆ ಹದ್ದು ದೇಶದ ಬೀಜಗಳಲ್ಲಿ ಒಂದನ್ನು (ಹಿಜ್ಕೀಯ) ತೆಗೆದುಕೊಂಡು

6 ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು,

7 ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು.

8 ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು.

9 ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ:

10 ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ?

11 ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,

12 “ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.

13 ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.

14 ಯೆಹೂದ ರಾಜ್ಯವು ದೀನತೆಯಿಂದಿದ್ದು ದಂಗೆ ಏಳದೆ ತನ್ನ ಒಪ್ಪಂದಕ್ಕೆ ಶಾಶ್ವತವಾಗಿ ಬದ್ಧವಾಗಿರಬೇಕೆಂಬುದು ನೆಬೂಕದ್ನೆಚ್ಚರನ ಬಯಕೆಯಾಗಿತ್ತು.

15 ಆದರೆ ಈ ಹೊಸ ರಾಜನು ನೆಬೂಕದ್ನೆಚ್ಚರನಿಗೆ ತಿರುಗಿ ಬೀಳಲು ಪ್ರಯತ್ನಿಸಿದನು. ಅವನು ಈಜಿಪ್ಟಿಗೆ ದೂತರನ್ನು ಕಳುಹಿಸಿ ಸಹಾಯವನ್ನು ಕೇಳಿದನು. ಬಹಳ ಕುದುರೆಗಳನ್ನೂ ಸೈನಿಕರನ್ನೂ ಕೇಳಿದನು. ಯೆಹೂದದ ಹೊಸ ರಾಜನು ತನ್ನ ಪ್ರಯತ್ನದಲ್ಲಿ ಜಯಶಾಲಿಯಾಗುವನು ಎಂದು ಭಾವಿಸುವಿರೋ? ಈ ಹೊಸ ರಾಜನು ಒಪ್ಪಂದವನ್ನು ಮುರಿದು ಶಿಕ್ಷೆಯಿಂದ ಪಾರಾಗುವನೆಂದು ನೀವು ಭಾವಿಸುವಿರೋ?”

16 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.

17 ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.

18 ಆದರೆ ಯೆಹೂದದ ರಾಜನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಯಾಕೆಂದರೆ ಅವನು ತನ್ನ ಪ್ರಮಾಣವನ್ನು ತಿರಸ್ಕರಿಸಿದನು ಮತ್ತು ತಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಹಾಕಿದನು.”

19 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು.

20 ನಾನು ಅವನಿಗೆ ಉರುಲನ್ನೊಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನ್ನು ಬಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.

21 ಅವನ ಸೈನ್ಯವನ್ನು ನಾಶಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವುದು.”

22 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು:

23 ಸಬತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು.

24 “ಆಗ ಬೇರೆ ಮರಗಳಿಗೆ, ನಾನು ದೊಡ್ಡ ಮರಗಳನ್ನು ನೆಲಕ್ಕೆ ಬೀಳಿಸುವೆನೆಂತಲೂ,

Ler em outra tradução

Comparar lado a lado