Ezequiel 21

KAN2010

1 ಯೆಹೋವನ ಸಂದೇಶ ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ,

2 “ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.

3 ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.

4 ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ನಿನ್ನಿದ ಕಡಿದುಹಾಕುವೆನು. ನನ್ನ ಖಡ್ಗವನ್ನು ಒರೆಯಿಂದ ತೆಗೆದು ದಕ್ಷಿಣದಿಂದ ಉತ್ತರದ ತನಕ ಇರುವ ಎಲ್ಲಾ ಜನರಿಗೆ ವಿರುದ್ಧವಾಗಿ ಉಪಯೋಗಿಸುವೆನು.

5 ಆಗ, ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನ್ನ ಖಡ್ಗವು ತನ್ನ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.’”

6 ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು.

7 ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಬೇಕು: ‘ಭೀತಿಯನ್ನುಟು ಮಾಡುವ ವಾರ್ತೆ ಬರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿಹೋಗಿರುತ್ತವೆ; ಕೈಗಳು ಬಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಬರುತ್ತಲಿದೆ. ಇವೆಲ್ಲಾ ನಡೆಯುವವು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

8 ಯೆಹೋವನ ನುಡಿ ನನಗೆ ಬಂತು. ಆತನು ಹೇಳಿದ್ದೇನೆಂದರೆ,

9 “ನರಪುತ್ರನೇ, ನನ್ನ ಪರವಾಗಿ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ:

10 ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತಮಾಡಲ್ಪಟ್ಟಿದೆ,

11 ಖಡ್ಗವು ಉಜ್ಜಲ್ಪಟ್ಟಿದೆ.

12 “‘ಬೊಬ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದ್ದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು.

13 ಯಾಕೆಂದರೆ ಶೋಧನೆಯು ಸಂಭವಿಸಿತು. ಆದರೆ ನೀನು ಬೆತ್ತದ ಶಿಕ್ಷೆ ಅನುಭವಿಸಲು ನಿರಾಕರಿಸಿದಿ. ಹಾಗಾದರೆ ನಾನು ನಿನಗೆ ಏನು ಉಪಯೋಗಿಸಬೇಕು? ಹೌದು, ಖಡ್ಗವೇ?’” ನನ್ನ ಒಡೆಯನಾದ ಯೆಹೋವನು ನುಡಿದಿದ್ದಾನೆ.

14 ಆತನು ಹೀಗೆ ಹೇಳಿದನು: “ನರಪುತ್ರನೇ, ಕೈತಟ್ಟಿ ನನ್ನ ಪರವಾಗಿ ಜನರೊಂದಿಗೆ ಮಾತನಾಡು.

15 ಅವರ ಹೃದಯಗಳು ಭಯದಿಂದ ಕರಗಿಹೋಗುವುದು.

16 ಖಡ್ಗವೇ, ಹರಿತವಾಗು,

17 “ಆಗ ನಾನೂ ಚಪ್ಪಾಳೆ ಬಡಿದು ನನ್ನ ಕೋಪವನ್ನು ನಿಲ್ಲಿಸುವೆನು.

18 ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೀಗೆ ಹೇಳಿದನು:

19 “ನರಪುತ್ರನೇ, ಬಾಬಿಲೋನಿನ ರಾಜನ ಖಡ್ಗವು ಇಸ್ರೇಲಿಗೆ ಬರಲು ಎರಡು ಮಾರ್ಗಗಳ ನಕ್ಷೆಯನ್ನು ರಚಿಸು. ಅವರೆಡೂ ಒಂದೇ ಪ್ರದೇಶದಿಂದ (ಬಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಬವನ್ನು ಚಿತ್ರಿಸು.

20 ಯಾವ ಮಾರ್ಗದಲ್ಲಿ ಖಡ್ಗವು ಬರುವದೋ ಆ ದಾರಿಯನ್ನು ಗುರುತಿಸು. ಒಂದು ರಸ್ತೆಯು ಅಮ್ಮೋನಿಯರ ನಗರವಾದ ರಬ್ಬಾಗೆ ಹೋಗುವದು. ಇನ್ನೊಂದು ಮಾರ್ಗವು ಯೆಹೂದದಲ್ಲಿರುವ ಭದ್ರಪಡಿಸಲ್ಪಟ್ಟ ಪಟ್ಟಣವಾಗಿರುವ ಜೆರುಸಲೇಮಿಗೆ ಹೋಗುವುದು.

21 ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.

22 “ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.

23 ಇಸ್ರೇಲ್ ಜನರಿಗೆ ಆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನ್ನು ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”

24 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಕೃತ್ಯಗಳನ್ನು ಮಾಡಿರುವೆ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪುಮಾಡಿಕೊಳ್ಳುವಂತೆ ಮಾಡುವೆ. ವೈರಿಯು ನಿನ್ನನ್ನು ಹಿಡಿಯುವನು.

25 ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”

26 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.

27 ನಾನು ಆ ನಗರವನ್ನು ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿಗೊಪ್ಪಿಸುವೆನು.”

28 ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ:

29 “‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು.

30 “‘ಬಾಬಿಲೋನೇ, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯತೀರಿಸುವೆನು.

31 ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.

32 ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.’”

Ler em outra tradução

Comparar lado a lado