1 ಪೂರ್ವಕಾಲದಲ್ಲಿ ದೇವರು ಪ್ರವಾದಿಗಳ ಮೂಲಕ ನಮ್ಮ ಜನರೊಂದಿಗೆ ಹಲವಾರು ವಿಧದಲ್ಲಿ ಅನೇಕ ಸಲ ಮಾತನಾಡಿದನು.
2 ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.
3 ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.
4 ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.
5 ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ:
6 ದೇವರು ತನ್ನ ಚೊಚ್ಚಲ ಮಗನನ್ನು ಈ ಲೋಕಕ್ಕೆ ಬರಮಾಡುವಾಗ, ಆತನು ಹೇಳುವುದೇನೆಂದರೆ,
7 ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ:
8 ಆದರೆ ದೇವರು ತನ್ನ ಮಗನನ್ನು ಕುರಿತು ಹೀಗೆ ಹೇಳಿದನು:
9 ನೀನು ಒಳ್ಳೆಯದನ್ನು ಪ್ರೀತಿಸುವೆ, ಕೆಟ್ಟದ್ದನ್ನು ದ್ವೇಷಿಸುವೆ.
10 ಇದಲ್ಲದೆ ದೇವರು ಹೀಗೆನ್ನುತ್ತಾನೆ:
11 ಇವೆಲ್ಲವು ನಾಶವಾಗುತ್ತವೆ, ಆದರೆ ನೀನು ಶಾಶ್ವತವಾಗಿರುವೆ.
12 ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ.
13 ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ:
14 ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.