1 ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.
2 ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.
3 ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು.
4 ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.
5 ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ:
6 ನೀನು ಸರ್ವಾಂಗಹೋಮಗಳಲ್ಲಿಯೂ
7 ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ.
8 ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)
9 ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.” ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ.
10 ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು.
11 ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.
12 ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
13 ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ.
14 ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.
15 ಪವಿತ್ರಾತ್ಮನು ನಮಗೆ ಇದರ ಬಗ್ಗೆ ತಿಳಿಸಿದ್ದಾನೆ. ಮೊದಲನೆಯದಾಗಿ ಆತನು ಹೇಳುವುದೇನೆಂದರೆ:
16 “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ:
17 ನಂತರ ಆತನು ಹೇಳುವುದೇನೆಂದರೆ:
18 ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ.
21 ದೇವರ ಮನೆಯನ್ನು ಆಳಲು ನಮಗೊಬ್ಬ ಶ್ರೇಷ್ಠ ಯಾಜಕನಿರುವನು.
22 ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.
23 ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.
24 ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.
25 ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.
26 ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.
27 ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.
28 ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
29 ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
30 “ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.
31 “ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ.
32 ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.
33 ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.
34 ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.
35 ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ.
36 ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.
37 ಆತನು ಹೀಗೆ ಹೇಳುತ್ತಾನೆ:
38 ನೀತಿವಂತನು ನಂಬಿಕೆಯಿಂದಲೇ
39 ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ.