Isaías 14

KAN2010

1 ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.

2 ಆ ಜನಾಂಗಗಳವರು ಇಸ್ರೇಲರನ್ನು ಇಸ್ರೇಲ್ ದೇಶಕ್ಕೆ ನಡಿಸುವರು. ಆ ಪರಜನಾಂಗಗಳ ಗಂಡಸರು ಹೆಂಗಸರು ಇಸ್ರೇಲರ ಗುಲಾಮರಾಗಿರುವರು. ಹಿಂದಿನ ದಿವಸಗಳಲ್ಲಿ ಆ ಜನರು ಇಸ್ರೇಲರನ್ನು ಬಲವಂತದಿಂದ ತಮ್ಮ ಗುಲಾಮರನ್ನಾಗಿ ಮಾಡಿದರು. ಆದರೆ ಈಗ ಇಸ್ರೇಲರು ಆ ಜನಾಂಗಗಳನ್ನು ಸೋಲಿಸಿ ಅವರನ್ನು ಆಳುವರು.

3 ಯೆಹೋವನು ನಿಮ್ಮ ಪ್ರಯಾಸವನ್ನು ನಿವಾರಿಸಿ ನಿಮ್ಮನ್ನು ಆದರಿಸುವನು. ಹಿಂದಿನ ದಿವಸಗಳಲ್ಲಿ ನೀವು ಗುಲಾಮರಾಗಿರುವಾಗ ಜನರು ನಿಮ್ಮನ್ನು ಬಹಳವಾಗಿ ಹಿಂಸಿಸಿದರು; ಬಲವಂತದಿಂದ ಕಷ್ಟಕರವಾದ ಕೆಲಸವನ್ನು ನಿಮ್ಮಿಂದ ಮಾಡಿಸಿದರು. ಆದರೆ ಯೆಹೋವನು ಆ ಸಂಕಟಗಳಿಂದ ನಿಮ್ಮನ್ನು ಪಾರುಮಾಡುವನು.

4 ಆ ಸಮಯದಲ್ಲಿ ಬಾಬಿಲೋನಿನ ಅರಸನ ಬಗ್ಗೆ ನೀವು ಹೀಗೆ ಹಾಡುವಿರಿ:

5 ಯೆಹೋವನು ದುಷ್ಟರ ಕೋಲನ್ನೂ ಅರಸನ ರಾಜದಂಡವನ್ನೂ ಮುರಿದುಹಾಕಿದನು.

6 ಬಾಬಿಲೋನಿನ ಅರಸನು ತನ್ನ ದುಷ್ಟತನದಲ್ಲಿ ಜನರನ್ನು ಹೊಡೆಯಿಸಿದನು.

7 ಆದರೆ ಈಗ ಇಡೀ ರಾಜ್ಯದಲ್ಲಿ ವಿಶ್ರಾಂತಿ ಇದೆ. ರಾಜ್ಯವು ಸಮಾಧಾನದಿಂದಿದೆ.

8 ನೀನು ದುಷ್ಟ ಅರಸನಾಗಿದ್ದೆ,

9 ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ.

10 “ಈಗ ನೀನು ನಮ್ಮಂತೆಯೇ ಸತ್ತ ಶರೀರವಾಗಿರುವೆ.

11 ನಿನ್ನ ಜಂಬವು ಪಾತಾಳಕ್ಕೆ ಕಳುಹಿಸಲಾಗಿದೆ.

12 ನೀನು ಉದಯ ನಕ್ಷತ್ರದಂತೆ ಇರುವೆ.

13 ನೀನು ಯಾವಾಗಲೂ ನಿನ್ನೊಳಗೆ,

14 ನಾನು ಉನ್ನತ ಮೇಘಮಂಡಲದ ಮೇಲೆ ಏರಿ

15 ಆದರೆ ಅದು ಸಂಭವಿಸಲಿಲ್ಲ.

16 ನಿನ್ನನ್ನು ನೋಡುವ ಜನರು ನಿನ್ನ ಬಗ್ಗೆ ಯೋಚಿಸುವರು.

17 ನಗರಗಳನ್ನು ನಾಶಮಾಡಿ ಭೂಮಿಯನ್ನು ಬೆಂಗಾಡನ್ನಾಗಿ ಮಾಡಿದವನು ಇವನೋ?

18 ಭೂಲೋಕದ ಪ್ರತಿಯೊಬ್ಬ ಅರಸನು ವೈಭವದೊಂದಿಗೆ ಕಾಲವಾದನು.

19 ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ.

20 ಬೇರೆ ಅನೇಕ ಅರಸರು ಸತ್ತುಹೋದರು. ಅವರೆಲ್ಲರಿಗೂ ಸ್ವಂತ ಸಮಾಧಿ ಇದೆ.

21 ಅವನ ಮಕ್ಕಳನ್ನು ಕೊಲ್ಲಲು ಸಿದ್ಧಗೊಳ್ಳಿರಿ.

22 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.

23 ಯೆಹೋವನು ಹೇಳುವುದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.

24 ಸರ್ವಶಕ್ತನಾದ ಯೆಹೋವನು ಒಂದು ವಾಗ್ದಾನವನ್ನು ಮಾಡಿದ್ದಾನೆ. ಆತನು ಹೇಳುವುದೇನೆಂದರೆ: “ನಾನು ಯೋಚಿಸಿದಂತೆಯೇ ಇವೆಲ್ಲವೂ ನೆರವೇರುವುದು ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ.

25 ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.

26 ಹೀಗೆ ಮಾಡಲು ನಾನೇ ಆಲೋಚಿಸಿದ್ದೇನೆ. ನನ್ನ ಯೋಜನೆಯಂತೆಯೇ ಘಟನೆಗಳು ಸಂಭವಿಸುತ್ತವೆ. ನನ್ನ ಭುಜಬಲದಿಂದ ಜನಾಂಗಗಳನ್ನು ಶಿಕ್ಷಿಸುವೆನು.”

27 ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.

28 ಅರಸನಾದ ಆಹಾಜನು ಸತ್ತ ವರ್ಷದಲ್ಲಿ ಈ ದುಃಖದ ಸಂದೇಶವು ಕೊಡಲ್ಪಟ್ಟಿತು:

29 ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಈ ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.

30 ಆದರೆ ನನ್ನ ಬಡಜನರು ಸುರಕ್ಷಿತವಾಗಿ ಊಟಮಾಡುವರು. ಅವರ ಮಕ್ಕಳೂ ಸುರಕ್ಷಿತವಾಗಿರುವರು. ನನ್ನ ಬಡಜನರು ಹಾಯಾಗಿ ಮಲಗಿ ಸುರಕ್ಷಿತರಾಗಿರುವರು. ಆದರೆ ನಿಮ್ಮ ಸಂತಾನದವರು ಹಸಿವೆಯಿಂದ ಸಾಯುವಂತೆ ಮಾಡುವೆನು. ನಿಮ್ಮ ದೇಶದಲ್ಲಿ ಉಳಿದಿರುವ ಜನರೆಲ್ಲರೂ ಸಾಯುವರು.

31 ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ!

32 ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು?

Ler em outra tradução

Comparar lado a lado