1 ಸಮುದ್ರದ ಮರುಭೂಮಿಗೆ ದುಃಖದ ಸಂದೇಶ:
2 ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ.
3 ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ.
4 ನಾನು ಚಿಂತೆಯಿಂದಲೂ ಭಯದಿಂದಲೂ ನಡುಗುತ್ತಿದ್ದೇನೆ.
5 ಜನರಾದರೋ, “ಊಟ ಬಡಿಸಿರಿ!
6 ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.
7 ಅವನು ಸಾಲಾಗಿ ಬರುತ್ತಿರುವ ಸೈನಿಕರನ್ನೋ, ಕತ್ತೆಗಳನ್ನೋ, ಒಂಟೆಗಳನ್ನೋ ನೋಡಿದರೆ ಬಹಳ ಸೂಕ್ಷ್ಮವಾಗಿ ಆಲಿಸಬೇಕು.”
8 ಒಂದು ದಿವಸ ಆ ಕಾವಲುಗಾರನು,
9 ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು.
10 ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜುಗುಜ್ಜಾಗುವಿರಿ.
11 ದೂಮದ ಕುರಿತು ದುಃಖದ ದೈವೋಕ್ತಿ:
12 ಅದಕ್ಕೆ ಕಾವಲುಗಾರ,
13 ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ:
14 ಬಾಯಾರಿದ ಪ್ರಯಾಣಿಕರಿಗೆ ಅವರು ಕುಡಿಯಲು ನೀರು ಕೊಟ್ಟರು.
15 ಅವರು ತಮ್ಮನ್ನು ಸಾಯಿಸಲಿಕ್ಕಿದ್ದ
16 ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.
17 ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.