1 ಯೆಹೋವನು ಹೇಳುವುದೇನೆಂದರೆ: “ಎಲ್ಲರಿಗೂ ನ್ಯಾಯವಂತರಾಗಿರಿ; ಎಲ್ಲರಿಗೂ ಒಳ್ಳೆಯವರಾಗಿರಿ; ಯಾಕೆಂದರೆ ನನ್ನ ರಕ್ಷಣೆಯು ಬೇಗನೆ ಬರಲಿದೆ; ಇಡೀ ಲೋಕಕ್ಕೆಲ್ಲಾ ನನ್ನ ನೀತಿಯು ಬೇಗನೆ ವ್ಯಕ್ತವಾಗುವುದು.
2 ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”
3 ಯೆಹೂದ್ಯರಲ್ಲದ ಜನರು ಯೆಹೋವನ ಬಳಿಗೆ ಬರುವರು. ಅವರು, “ಯೆಹೋವನು ನಮ್ಮನ್ನು ತನ್ನ ಜನರೊಂದಿಗೆ ಸ್ವೀಕರಿಸುವದಿಲ್ಲ” ಎಂದು ಹೇಳಬಾರದು. ಕಂಚುಕಿಯು, “ನಾನು ಕೆಲಸಕ್ಕೆ ಬಾರದ ಒಣಗಿದ ಮರ.” ಎಂದು ಹೇಳಬಾರದು.
6 “ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.
7 ನಾನು ಅವರನ್ನು ನನ್ನ ಪವಿತ್ರಪರ್ವತಕ್ಕೆ ತರುವೆನು: ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಸಂತೋಷಪಡಿಸುವೆನು. ಅವರು ಅರ್ಪಿಸುವ ಸರ್ವಾಂಗಹೋಮಗಳನ್ನೂ ಯಜ್ಞಗಳನ್ನೂ ನಾನು ಮೆಚ್ಚಿಕೊಳ್ಳುವೆನು. ಯಾಕೆಂದರೆ ನನ್ನ ಆಲಯವು ಎಲ್ಲಾ ಜನಾಂಗದವರಿಗೆ ಪ್ರಾರ್ಥನಾಲಯವೆಂದು ಕರೆಯಲ್ಪಡುವುದು.”
8 ಇದು ನನ್ನ ಒಡೆಯನಾದ ಯೆಹೋವನ ಮಾತುಗಳು.
9 ಕಾಡುಗಳಲ್ಲಿಯೂ ಹೊಲಗಳಲ್ಲಿಯೂ ಇರುವ ಪ್ರಾಣಿಗಳೇ, ಬಂದು ತಿನ್ನಿರಿ!
10 ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ.
11 ಅವರು ಹಸಿದ ನಾಯಿಗಳಂತಿದ್ದಾರೆ.
12 ಅವರು ಬಂದು,