1 ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ.
2 ಅಲ್ಲಿ ಯೌವನಸ್ಥನಾದ ಎಲೀಹು ಸಹ ಇದ್ದನು. ಎಲೀಹು ಬರಕೇಲನ ಮಗನು. ಬರಕೇಲನು ಬೂಜ್ ಕುಲದವನು. ಎಲೀಹು, ರಾಮ್ ಸಂತಾನಕ್ಕೆ ಸೇರಿದವನು. ಎಲೀಹುವಿಗೆ ಯೋಬನ ಮೇಲೆ ಬಹು ಕೋಪಬಂದಿತು. ಯಾಕೆಂದರೆ ಯೋಬನು ತಾನು ದೇವರಿಗಿಂತಲೂ ನೀತಿವಂತನೆಂದು ಪ್ರತಿಪಾದಿಸುತ್ತಿದ್ದನು.
3 ಎಲೀಹುವಿಗೆ ಯೋಬನ ಮೂವರ ಸ್ನೇಹಿತರ ಮೇಲೆಯೂ ಬಹು ಕೋಪಬಂದಿತು. ಯಾಕೆಂದರೆ ಯೋಬನ ಪ್ರಶ್ನೆಗಳಿಗೆ ಪರಿಣಾಮಕಾರಿಯಾದ ಉತ್ತರವನ್ನು ಕೊಟ್ಟು ಯೋಬನೇ ತಪ್ಪಿತಸ್ಥನೆಂದು ನಿರೂಪಿಸಲು ಯೋಬನ ಮೂವರು ಗೆಳೆಯರಿಗೆ ಗೊತ್ತಿರಲಿಲ್ಲ. ಆದಕಾರಣ, ದೇವರೇ ತಪ್ಪಿತಸ್ಥನೆಂದು ತೋರಿತು.
4 ಅಲ್ಲಿದ್ದವರೆಲ್ಲರಲ್ಲಿ ಎಲೀಹು ಚಿಕ್ಕವನಾಗಿದ್ದನು. ಆದ್ದರಿಂದ ಪ್ರತಿಯೊಬ್ಬರು ಮಾತಾಡಿ ಮುಗಿಸುವವರೆಗೆ ಅವನು ಕಾದುಕೊಂಡಿದ್ದನು. ಬಳಿಕ ಅವನಿಗೆ ತಾನೂ ಮಾತಾಡಬಹುದೆನಿಸಿತು.
5 ಯೋಬನ ಮೂವರು ಸ್ನೇಹಿತರ ಬಾಯಲ್ಲಿ ಉತ್ತರವಿಲ್ಲದಿರುವುದನ್ನು ಕಂಡು ಎಲೀಹು ಕೋಪಗೊಂಡನು.
6 ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು:
7 ‘ವೃದ್ಧರು ಮೊದಲು ಮಾತಾಡಬೇಕು.
8 ಆದರೆ ಮನುಷ್ಯರಲ್ಲಿರುವ ದೇವರಾತ್ಮನು
9 ವೃದ್ದರು ಮಾತ್ರ ಜ್ಞಾನಿಗಳಲ್ಲ,
10 “ಆದಕಾರಣ ಎಲೀಹು ಎಂಬ ನಾನು ಹೇಳುವೆ, ನನಗೆ ಕಿವಿಗೊಡಿರಿ!
11 ನೀವು ಮಾತಾಡುತ್ತಿದ್ದಾಗ ನಾನು ತಾಳ್ಮೆಯಿಂದ ಕಾದುಕೊಂಡಿದ್ದೆನು.
12 ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು.
13 ನೀವು ಮೂವರು, ‘ನಾವು ಜ್ಞಾನವನ್ನು ಕಂಡುಕೊಂಡಿದ್ದೇವೆ,
14 ಯೋಬನು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ಹೊರಡಿಸಲಿಲ್ಲ.
15 “ಯೋಬನೇ, ನಿನ್ನ ಮೂವರು ಸ್ನೇಹಿತರು ವಾದ ಮಾಡಲು ವಿಫಲರಾಗಿದ್ದಾರೆ.
16 ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ;
17 ಇಲ್ಲ! ನಾನು ಸಹ ನನ್ನ ಉತ್ತರವನ್ನು ಕೊಡುವೆನು.
18 ಯಾಕೆಂದರೆ ನನ್ನಲ್ಲಿ ಹೇಳಲು ಬೇಕಾದಷ್ಟಿದೆ.
19 ಆಹಾ, ದ್ರಾಕ್ಷಾರಸವನ್ನು ತುಂಬಿ ಬಾಯಿಕಟ್ಟಿದ ಹೊಸ ಬುದ್ದಲಿಯಂತೆ
20 ಆದ್ದರಿಂದ ನಾನು ಮಾತಾಡಲೇಬೇಕು; ಆಗ ನನಗೆ ಉಪಶಮನವಾಗುತ್ತದೆ.
21 ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ;
22 ಮುಖಸ್ತುತಿ ಮಾಡುವುದೇ ನನಗೆ ತಿಳಿದಿಲ್ಲ.