Jeremias 17

KAN2010

1 “ಯೆಹೂದದ ಜನರ ಅಪರಾಧ

2 ಅವರ ಮಕ್ಕಳು ಸುಳ್ಳುದೇವರುಗಳಿಗೆ ಅರ್ಪಿಸಿದ

3 ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ

4 ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ.

5 ಯೆಹೋವನು ಹೀಗೆ ಹೇಳಿದನು:

6 ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ,

7 ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು.

8 ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ,

9 “ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ.

10 ನಾನೇ ಯೆಹೋವನು,

11 ಕೆಲವು ಸಲ ಪಕ್ಷಿಯು

12 ಆದಿಯಿಂದ ನಮ್ಮ ಪವಿತ್ರಾಲಯವು

13 ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ,

14 ಯೆಹೋವನೇ, ನೀನು ನನ್ನನ್ನು ವಾಸಿಮಾಡಿದರೆ

15 ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ.

16 ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ,

17 ಯೆಹೋವನೇ, ನನ್ನನ್ನು ಹಾಳುಮಾಡಬೇಡ.

18 ಜನರು ನನ್ನನ್ನು ಹಿಂಸಿಸುತ್ತಿದ್ದಾರೆ.

19 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು.

20 “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!

21 ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.

22 ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.

23 ಆದರೆ ನಿಮ್ಮ ಪೂರ್ವಿಕರು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಅವರು ನನಗೆ ಗಮನಕೊಡಲಿಲ್ಲ. ನಿಮ್ಮ ಪೂರ್ವಿಕರು ತುಂಬಾ ಮೊಂಡರಾಗಿದ್ದರು. ನಾನು ಅವರನ್ನು ದಂಡಿಸಿದೆ. ಆದರೆ ಅದರಿಂದ ಏನೂ ಪ್ರಯೋಜನವಾಗಲಿಲ್ಲ. ಅವರು ನನ್ನ ಮಾತನ್ನು ಕೇಳಲಿಲ್ಲ.

24 ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’” ಇದು ಯೆಹೋವನ ನುಡಿ. “‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು.

25 “‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.

26 ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.

27 “‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”

Ler em outra tradução

Comparar lado a lado