Jeremias 18

KAN2010

1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು:

2 “ಯೆರೆಮೀಯನೇ, ನೀನು ಕುಂಬಾರನ ಮನೆಗೆ ಹೋಗು. ನಾನು ಕುಂಬಾರನ ಮನೆಯಲ್ಲಿಯೇ ನಿನಗೆ ಸಂದೇಶವನ್ನು ಕೊಡುತ್ತೇನೆ.”

3 ನಾನು ಕುಂಬಾರನ ಮನೆಗೆ ಹೋದೆನು. ಅವನು ಜೇಡಿಮಣ್ಣನ್ನು ಉಪಯೋಗಿಸಿ ಚಕ್ರದಿಂದ ಕೆಲಸ ಮಾಡುವದನ್ನು ನಾನು ಕಂಡೆನು.

4 ಅವನು ಜೇಡಿಮಣ್ಣಿನಿಂದ ಒಂದು ಮಡಕೆಯನ್ನು ಮಾಡುತ್ತಿದ್ದನು. ಆ ಮಡಕೆಯಲ್ಲಿ ಯಾವುದೋ ಒಂದು ದೋಷವಿತ್ತು. ಆದ್ದರಿಂದ ಆ ಕುಂಬಾರನು ಪುನಃ ಆ ಜೇಡಿಮಣ್ಣನ್ನು ಬಳಸಿ ಮತ್ತೊಂದು ಮಡಕೆಯನ್ನು ಮಾಡಿದನು. ಮಡಕೆಗೆ ತಾನು ಬಯಸಿದ ಆಕಾರವನ್ನು ಕೊಡಲು ತನ್ನ ಕೈಗಳನ್ನು ಉಪಯೋಗಿಸಿದನು.

5 ಆಗ ನನಗೆ ಯೆಹೋವನಿಂದ ಈ ಸಂದೇಶ ಬಂದಿತು:

6 “ಇಸ್ರೇಲ್ ಮನೆತನದವರೇ, ನಾನು ನಿಮಗೆ ಹೀಗೆಯೇ ಮಾಡಲು ಸಾಧ್ಯವೆಂಬುದನ್ನು ನೀವು ಬಲ್ಲಿರಿ. ನೀವು ಕುಂಬಾರನ ಕೈಯಲ್ಲಿದ್ದ ಜೇಡಿಮಣ್ಣಿನಂತಿದ್ದೀರಿ. ನಾನು ಆ ಕುಂಬಾರನಂತಿದ್ದೇನೆ.

7 ಒಮ್ಮೆ ನಾನು ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕುರಿತು ಮಾತನಾಡುವಾಗ ಆ ಜನಾಂಗವನ್ನು ನಾನು ಖಂಡಿಸುವೆನೆಂದು ಮತ್ತು ಆ ಜನಾಂಗವನ್ನು ನಾನು ನಾಶಪಡಿಸುವೆನೆಂದು ಹೇಳಬಹುದು.

8 ಆದರೆ ಆ ಜನಾಂಗದ ಜನರು ತಮ್ಮ ಮನಸ್ಸನ್ನು ಮತ್ತು ಜೀವನವನ್ನು ಪರಿವರ್ತಿಸಿಕೊಳ್ಳಬಹುದು. ಆ ಜನಾಂಗದ ಜನರು ಮಾಡುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಆಗ ನಾನು ನನ್ನ ವಿಚಾರವನ್ನು ಬದಲಾಯಿಸಿ, ಆ ಜನಾಂಗವನ್ನು ನಾಶಪಡಿಸಬೇಕೆಂದು ಮಾಡಿದ ನನ್ನ ಮುಂಚಿನ ಯೋಜನೆಗಳನ್ನು ಕಾರ್ಯರೂಪಕ್ಕೆ ತರದಿರಬಹುದು.

9 ಇನ್ನೊಮ್ಮೆ ಒಂದು ಜನಾಂಗದ ಬಗ್ಗೆ ಹೇಳುವಾಗ ಆ ಜನಾಂಗವನ್ನು ನಾನು ಅಭಿವೃದ್ಧಿಗೆ ತರುತ್ತೇನೆ, ಅದನ್ನು ನೆಟ್ಟು ಕಟ್ಟುತ್ತೇನೆ ಎಂದು ಹೇಳಬಹುದು.

10 ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಬೇಕೆಂದಿದ್ದ ಒಳಿತಿನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಬಹುದು.

11 “ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.

12 ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.

13 ಯೆಹೋವನು ಹೇಳುವದನ್ನು ಆಲಿಸಿರಿ:

14 ಲೆಬನೋನಿನ ಪರ್ವತಗಳ ಮೇಲಿನ ಹಿಮವು ಇಳಿಜಾರಿನ ಬಂಡೆಯಿಂದ ಎಂದಾದರೂ ಕರಗುವುದೇ?

15 ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ.

16 ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು.

17 ಪೂರ್ವದಿಂದ ಬರುವ ಗಾಳಿಯಂತೆ

18 ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”

19 ಯೆಹೋವನೇ, ನನ್ನ ಮಾತನ್ನು ಆಲಿಸು,

20 ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು.

21 ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು.

22 ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ.

23 ಯೆಹೋವನೇ, ನನ್ನನ್ನು ಕೊಲ್ಲಲು ಅವರು ಹಾಕಿದ ಯೋಜನೆಗಳನ್ನೆಲ್ಲ ನೀನು ಬಲ್ಲೆ.

Ler em outra tradução

Comparar lado a lado