Jeremias 21

KAN2010

1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.

2 ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”

3 ಆಗ ಯೆರೆಮೀಯನು ಪಷ್ಹೂರ ಮತ್ತು ಚೆಫನ್ಯರಿಗೆ ಹೀಗೆ ಉತ್ತರಕೊಟ್ಟನು: “ರಾಜನಾದ ಚಿದ್ಕೀಯನಿಗೆ ಹೇಳಿರಿ.

4 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ.

5 ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಬಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಬಹಳ ಕೋಪ ಬಂದಿದೆ; ಅದಕ್ಕಾಗಿ ನನ್ನ ಬಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಬಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ತೋರಿಸುತ್ತೇನೆ.

6 ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾನು ಕೊಂದುಬಿಡುತ್ತೇನೆ. ನಾನು ಜನರನ್ನು ಮತ್ತು ಪ್ರಾಣಿಗಳನ್ನು ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.’” ಇದು ಯೆಹೋವನ ನುಡಿ.

7 “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’

8 “ಜೆರುಸಲೇಮಿನ ಜನರಿಗೆ ಇದನ್ನು ಸಹ ಹೇಳಿರಿ. ಯೆಹೋವನು ಹೀಗೆನ್ನುತ್ತಾನೆ, ‘ನಾನು ನಿಮಗೆ ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇನೆ ಎಂಬುದನ್ನು ತಿಳಿದುಕೊಳ್ಳಿರಿ.

9 ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬಂದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬಂದುಕುವರು.

10 ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’” ಇದು ಯೆಹೋವನಿಂದ ಬಂದ ಸಂದೇಶ. “‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’”

11 “ಯೆಹೂದದ ರಾಜಮನೆತನದವರಿಗೆ ಈ ವಿಷಯಗಳನ್ನು ತಿಳಿಸಿರಿ:

12 ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ:

13 “ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ.

14 “ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ.

Ler em outra tradução

Comparar lado a lado