1 ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು.
2 ‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.
3 ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಬದ್ಧವಾಗಿಯೂ ನ್ಯಾಯಬದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಬೇಡಿ; ನಿರಪರಾಧಿಗಳನ್ನು ಕೊಲ್ಲಬೇಡಿ.
4 ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಧಿಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.
5 ನೀವು ಈ ಆಜ್ಞೆಗಳನ್ನು ಪಾಲಿಸದಿದ್ದರೆ ರಾಜನ ಅರಮನೆಯನ್ನು ನಾಶಮಾಡಲಾಗುವುದು. ಅದು ಕಲ್ಲುಬಂಡೆಗಳ ರಾಶಿಯಾಗುವದೆಂದು ಯೆಹೋವನಾದ ನಾನು ಆಣೆಯಿಟ್ಟುಕೊಂಡು ಹೇಳುತ್ತೇನೆ’” ಎಂದು ಯೆಹೋವನು ನುಡಿದನು.
6 ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ:
7 ಅರಮನೆಯನ್ನು ಹಾಳುಮಾಡಲು ನಾನು ಜನರನ್ನು ಕಳುಹಿಸುತ್ತೇನೆ.
8 “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು? ಎಂದು ಒಬ್ಬರನ್ನೊಬ್ಬರು ಕೇಳುವರು.’
9 ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’”
10 ಸತ್ತ ರಾಜನ ಬಗ್ಗೆ ಅಳಬೇಡಿ.
11 ಯೋಷೀಯನ ಮಗನಾದ ಯೋಹಾಜನ (ಶಲ್ಲೂಮನ) ಬಗ್ಗೆ ಯೆಹೋವನು ಹೀಗೆಂದನು: (ಶಲ್ಲೂಮನು ತನ್ನ ತಂದೆಯಾದ ಯೋಷೀಯನ ಮರಣಾನಂತರ ರಾಜನಾದನು.) “ಯೋಹಾಜನು ಜೆರುಸಲೇಮಿನಿಂದ ಹೊರಟುಹೋದನು. ಅವನು ಮತ್ತೆಂದಿಗೂ ಜೆರುಸಲೇಮಿಗೆ ಹಿಂದಿರುಗುವುದಿಲ್ಲ.
12 ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”
13 “ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು.
14 “ಯೆಹೋಯಾಕೀಮನು,
15 “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು
16 ಯೋಷೀಯನು ದೀನದರಿದ್ರರಿಗೆ ಸಹಾಯ ಮಾಡುತ್ತಿದ್ದನು.
17 “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ.
18 ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು,
19 ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ.
20 “ಯೆಹೂದವೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೊ,
21 “ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ.
22 ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು.
23 “ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ.
24 ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.
25 ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.
26 ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ.
27 ಯೆಹೋಯಾಚೀನನೇ, ನೀನು ನಿನ್ನ ದೇಶಕ್ಕೆ ಹಿಂದಿರುಗಬೇಕೆಂದು ಅಪೇಕ್ಷಿಸಿದರೂ ನಿನಗೆ ಬರಲು ಸಾಧ್ಯವಾಗದು.”
28 ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ.
29 ದೇಶವೇ, ದೇಶವೇ, ಯೆಹೂದದ ದೇಶವೇ,
30 ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ.