Jeremias 23

KAN2010

1 ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”

2 ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.

3 “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.

4 ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.

5 ಇದು ಯೆಹೋವನ ಸಂದೇಶ:

6 ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು

7 ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.

8 ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”

9 ಪ್ರವಾದಿಗಳಿಗೊಂದು ಸಂದೇಶ.

10 ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ.

11 “ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ.

12 ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ.

13 “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ.

14 ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ

15 ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ,

16 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ:

17 ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ.

18 ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ.

19 ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು.

20 ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ

21 ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ.

22 ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ

23 ಈ ಸಂದೇಶ ಯೆಹೋವನಿಂದ ಬಂದಿತು:

24 ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ

25 “ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.

26 ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.

27 ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.

28 ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.

29 ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.

30 “ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ.

31 ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.

32 ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.

33 “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ.

34 “ಒಬ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದ್ದರಿಂದ ನಾನು ಆ ವ್ಯಕ್ತಿಯನ್ನು ಮತ್ತು ಅವರ ಇಡೀ ಕುಟುಂಬವನ್ನು ದಂಡಿಸುತ್ತೇನೆ.

35 ನೀವು ಪರಸ್ಪರ ‘ಯೆಹೋವನ ಉತ್ತರವೇನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಮಾತನಾಡಬೇಕು.

36 ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.

37 “ನೀವು ದೇವರ ಸಂದೇಶವನ್ನು ತಿಳಿದುಕೊಳ್ಳ ಬಯಸಿದರೆ ಪ್ರವಾದಿಯನ್ನು ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನ್ನು ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.

38 ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು “ಯೆಹೋವನ ಭಾರವೆಂದು” ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ.

39 ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.

40 ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.’”

Ler em outra tradução

Comparar lado a lado