1 ಯೆಹೋವನು ಈ ವಿಷಯಗಳನ್ನು ಹೇಳಿದನು: “ಆ ಸಮಯದಲ್ಲಿ ನಾನು ಇಸ್ರೇಲಿನ ಎಲ್ಲಾ ಗೋತ್ರಗಳ ದೇವರಾಗಿರುವೆನು; ಅವರು ನನ್ನ ಪ್ರಜೆಗಳಾಗಿರುವರು.”
2 ಯೆಹೋವನು ಹೀಗೆನ್ನುತ್ತಾನೆ:
3 ದೂರದಿಂದ ಯೆಹೋವನು
4 ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು,
5 ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನ್ನು ಬೆಳೆಸುವಿರಿ.
6 ಒಂದು ಕಾಲ ಬರುವುದು,
7 ಯೆಹೋವನು ಹೀಗೆಂದನು:
8 ನಾನು ಇಸ್ರೇಲರನ್ನು
9 ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು.
10 “ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ.
11 ಯೆಹೋವನು ಯಾಕೋಬ್ಯರನ್ನು ಹಿಂದಕ್ಕೆ ಕರೆದುಕೊಂಡು ಬರುವನು.
12 ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು;
13 ಆಗ ಇಸ್ರೇಲಿನ ತರುಣಿಯರು
14 ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು.
15 ಯೆಹೋವನು ಹೀಗೆನ್ನುತ್ತಾನೆ:
16 ಆದರೆ ಯೆಹೋವನು, “ಅಳುವದನ್ನು ನಿಲ್ಲಿಸು.
17 ಆದ್ದರಿಂದ ಇಸ್ರೇಲೇ, ನಿನ್ನ ಮಕ್ಕಳು
18 “ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ.
19 ಯೆಹೋವನೇ, ನಾನು ನಿನಗೆ ದೂರವಾಗಿ ಅಲೆದಾಡಿದೆನು.
20 ಯೆಹೋವನು ಹೀಗೆನ್ನುತ್ತಾನೆ:
21 “ಇಸ್ರೇಲರೇ, ದಾರಿತೋರುವ
22 ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ.
23 ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’
24 “ಯೆಹೂದದ ಎಲ್ಲಾ ಊರುಗಳಲ್ಲಿ ಜನರು ಪರಸ್ಪರ ಶಾಂತಿಯಿಂದ ವಾಸಿಸುವರು. ರೈತರೂ ದನಕುರಿಗಳನ್ನು ಮೇಯಿಸುವ ಜನರೂ ಶಾಂತಿಯಿಂದ ಯೆಹೂದದಲ್ಲಿ ವಾಸಿಸುವರು.
25 ದುಬರ್ಲಗೊಂಡ ಮತ್ತು ದಣಿದ ಜನರಿಗೆ ನಾನು ಶಕ್ತಿಯನ್ನೂ ವಿಶ್ರಾಂತಿಯನ್ನೂ ಕೊಡುವೆನು.”
26 ಆಗ ನಾನು ಎಚ್ಚೆತ್ತು ಸುತ್ತಮುತ್ತಲು ನೋಡಿದೆ. ಅದೊಂದು ಬಹಳ ಹಿತಕರವಾದ ನಿದ್ರೆಯಾಗಿತ್ತು.
27 ಯೆಹೋವನು ಹೀಗೆ ನುಡಿದನು: “ಇಸ್ರೇಲ್ ಮತ್ತು ಯೆಹೂದ ವಂಶಗಳು ಬೆಳೆಯುವದಕ್ಕೆ ನಾನು ಸಹಾಯ ಮಾಡುವ ದಿನಗಳು ಬರುತ್ತಿವೆ. ಸಸಿಗಳನ್ನು ನೆಟ್ಟ ಮೇಲೆ ಅವುಗಳನ್ನು ನೋಡಿಕೊಳ್ಳುವ ಹಾಗೆ ಅವರ ಮಕ್ಕಳು ಮತ್ತು ಅವರ ಪಶುಗಳು ಬೆಳೆಯುವದಕ್ಕೂ ನಾನು ಸಹಾಯ ಮಾಡುತ್ತೇನೆ.
28 ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
29 “‘ಹುಳಿದ್ರಾಕ್ಷಿ ತಿಂದವರು ತಂದೆತಾಯಿಗಳು!
30 ಪ್ರತಿಯೊಬ್ಬನು ತನ್ನ ಪಾಪದ ನಿಮಿತ್ತವೇ ಸಾಯುವನು. ಹುಳಿದ್ರಾಕ್ಷಿಯನ್ನು ತಿಂದವನೇ ಅದರ ರುಚಿಯನ್ನು ಕಾಣುವನು.”
31 ಯೆಹೋವನು ಹೀಗೆಂದನು: “ನಾನು ಇಸ್ರೇಲರೊಂದಿಗೂ ಮತ್ತು ಯೆಹೂದ್ಯರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಸಮಯ ಬರುತ್ತಿದೆ.
32 ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.
33 ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.
34 ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಟರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.
35 ಯೆಹೋವನು ಹೀಗೆನ್ನುತ್ತಾನೆ:
36 ಯೆಹೋವನು ಹೀಗೆನ್ನುತ್ತಾನೆ:
37 ಯೆಹೋವನು ಹೀಗೆನ್ನುತ್ತಾನೆ: “ನಾನು ಇಸ್ರೇಲ್ ಸಂತತಿಯವರನ್ನು ತಿರಸ್ಕರಿಸುವುದೇ ಇಲ್ಲ.
38 ಇದು ಯೆಹೋವನ ನುಡಿ: “ಯೆಹೋವನಿಗಾಗಿ ಜೆರುಸಲೇಮ್ ನಗರವನ್ನು ಮತ್ತೆ ಕಟ್ಟುವ ಕಾಲ ಬರುತ್ತಿದೆ. ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಇಡೀ ಪಟ್ಟಣವನ್ನು ಮತ್ತೊಮ್ಮೆ ಕಟ್ಟಲಾಗುವುದು.
39 ಅಳತೆಯ ನೂಲು ಮೂಲೆಯ ಬಾಗಿಲಿನಿಂದ ಗಾರೇಬ್ ಗುಡ್ಡದ ನೇರವಾಗಿ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವುದು.
40 ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”