1 ಈ ಸಂದೇಶ ಅಮ್ಮೋನ್ಯರನ್ನು ಕುರಿತದ್ದು. ಯೆಹೋವನು ಹೀಗೆ ಹೇಳಿದನು:
2 ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು
3 “ಹೆಷ್ಬೋನಿನ ಜನರೇ, ಗೋಳಾಡಿರಿ;
4 ನೀನು ನಿನ್ನ ಬಲದ ಬಗ್ಗೆ ಜಂಬ ಕೊಚ್ಚಿಕೊಳ್ಳುತ್ತಿರುವೆ,
5 ಆದರೆ ಸರ್ವಶಕ್ತನಾದ ಯೆಹೋವನು ಹೀಗೆನ್ನುವನು,
6 “ಅಮ್ಮೋನ್ಯರನ್ನು ಸೆರೆಯಾಳುಗಳನ್ನಾಗಿ ಕೊಂಡೊಯ್ಯಲಾಗುವುದು. ಆದರೆ ಅಮ್ಮೋನ್ಯರನ್ನು ನಾನು ಪುನಃ ಹಿಂದಕ್ಕೆ ಕರೆತರುವ ಕಾಲ ಬರುವದು.” ಇದು ಯೆಹೋವನ ನುಡಿ.
7 ಈ ಸಂದೇಶ ಎದೋಮನ್ನು ಕುರಿತದ್ದು. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ:
8 ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ;
9 “ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು;
10 ಆದರೆ ಏಸಾವನಿಂದ ನಾನು ಎಲ್ಲವನ್ನು ಕಿತ್ತುಕೊಳ್ಳುವೆನು.
11 ನಿನ್ನ ಅನಾಥಮಕ್ಕಳನ್ನು ನಾನು ಸಂರಕ್ಷಿಸುವೆನು.
12 ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”
13 ಯೆಹೋವನು ಹೀಗೆನ್ನುತ್ತಾನೆ, “ನನ್ನ ಸಬಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
14 ಯೆಹೋವನ ಒಂದು ಸಂದೇಶವನ್ನು ಕೇಳಿದೆ.
15 ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ.
16 ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ.
17 “ಎದೋಮನ್ನು ನಾಶಮಾಡಲಾಗುವುದು.
18 ಸೊದೋಮ್ ಗೊಮೋರನಗರಗಳಂತೆಯೂ ಅವುಗಳ ಸುತ್ತಲಿನ ಪಟ್ಟಣಗಳಂತೆಯೂ ಎದೋಮ್ ನಾಶವಾಗುವುದು.
19 “ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”
20 ಎದೋಮ್ಯರಿಗೆ ಯೆಹೋವನು
21 ಎದೋಮ್ಯರ ಪತನದ ಶಬ್ಧಕ್ಕೆ ಭೂಮಿಯು ನಡುಗುವುದು.
22 ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು.
23 ಈ ಸಂದೇಶವು ದಮಸ್ಕ ನಗರದ ಕುರಿತಾಗಿದೆ:
24 ದಮಸ್ಕ ನಗರವು ನಿಬರ್ಲವಾಗಿದೆ.
25 “ದಮಸ್ಕವು ಸಂತೋಷಭರಿತವಾದ ನಗರವಾಗಿದೆ.
26 ಆದ್ದರಿಂದ ತರುಣರು ನಗರದ ಚೌಕಗಳಲ್ಲಿ ಮರಣಹೊಂದುವರು.
27 “ದಮಸ್ಕದ ಗೋಡೆಗಳಿಗೆ ನಾನು ಬೆಂಕಿ ಹಚ್ಚುವೆನು.
28 ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ:
29 ಅವರ ಗುಡಾರಗಳನ್ನು ಮತ್ತು ಹಿಂಡುಗಳನ್ನು ತೆಗೆದುಕೊಂಡು ಹೋಗಲಾಗುವುದು.
30 ಹಾಚೋರಿನ ನಿವಾಸಿಗಳೇ, ಬೇಗನೆ ಓಡಿಹೋಗಿರಿ,
31 “ಒಂದು ಜನಾಂಗವು ಯಾರೂ ತಮ್ಮನ್ನು ಸೋಲಿಸಲಾರರು ಎಂದು ನೆಮ್ಮದಿಯಿಂದಲೂ ಸಮಾಧಾನದಿಂದಲೂ ಇದೆ.
32 “ವೈರಿಯು ಅವರ ಒಂಟೆಗಳನ್ನು ಮತ್ತು
33 “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು.
34 ಚಿದ್ಕೀಯನು ಯೆಹೂದದ ರಾಜನಾದ ಹೊಸದರಲ್ಲಿಯೇ ಪ್ರವಾದಿಯಾದ ಯೆರೆಮೀಯನು ಯೆಹೋವನಿಂದ ಒಂದು ಸಂದೇಶವನ್ನು ಪಡೆದನು. ಈ ಸಂದೇಶವು ಏಲಾಮ್ ಜನಾಂಗವನ್ನು ಕುರಿತದ್ದು.
35 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ:
36 ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು
37 ಅವರ ಶತ್ರುಗಳ ಕಣ್ಣೆದುರಿನಲ್ಲಿಯೇ
38 ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು.
39 “ಆದರೆ ಭವಿಷ್ಯದಲ್ಲಿ ನಾನು ಏಲಾಮಿಗೆ ಒಳ್ಳೆಯದನ್ನು ಮಾಡುವೆನು.”