1 ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.
2 ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.
3 “ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.
4 “ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ.
5 ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ.
6 ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ.
7 ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ
8 “‘“ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ.
9 ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ.
10 ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ.
11 ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು
12 ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು.
13 “ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು
14 “ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ?
15 ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು.
16 ದಾನ್ಕುಲದವರ ಪ್ರದೇಶದಿಂದ
17 “ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ.
18 ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.
19 ನನ್ನ ಜನರ ಮೊರೆಯನ್ನು ಆಲಿಸು.
20 “ಸುಗ್ಗಿಯ ಕಾಲ ಮುಗಿಯಿತು,
21 ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ.
22 ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ.