1 ಸನ್ಮಾನ್ಯ ಥೆಯೊಫಿಲನೇ,
2 ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.
3 ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.
4 ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನಿನಗೆ ಸ್ಪಷ್ಟವಾಗಿರುವುದು.
5 ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
6 ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.
7 ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.
8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.
9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.
10 ಹೊರಗಡೆ ಬಹು ಜನರಿದ್ದರು. ಧೂಪವನ್ನರ್ಪಿಸುತ್ತಿದ್ದ ಸಮಯದಲ್ಲಿ ಅವರು ಪ್ರಾರ್ಥಿಸುತ್ತಿದ್ದರು.
11 ಆಗ, ಧೂಪಪೀಠದ ಬಲಗಡೆಯಲ್ಲಿ, ಪ್ರಭುವಿನ ದೂತನೊಬ್ಬನು ಬಂದು ಜಕರೀಯನ ಮುಂದೆ ನಿಂತನು.
12 ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು.
13 ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
14 ಅವನ ಜನನದಿಂದ ನಿಮಗೆ ಹರ್ಷಾನಂದವಾಗುವುದು. ಬಹುಜನರು ಸಂತೋಷಪಡುವರು.
15 ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
16 “ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು.
17 ಅವನು ಪ್ರಭುವಿಗೆ ಮುಂದೂತನಾಗಿ ಹೋಗುವನು. ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿರುವನು; ತಂದೆ ಮತ್ತು ಮಕ್ಕಳ ನಡುವೆ ಸಮಾಧಾನವನ್ನು ಉಂಟುಮಾಡುವನು; ಅವಿಧೇಯರಾದ ಅನೇಕರನ್ನು ನೀತಿವಂತರ ಜ್ಞಾನದ ಕಡೆಗೆ ನಡೆಸುವನು; ಜನರನ್ನು ಪ್ರಭುವಿನ ಆಗಮನಕ್ಕೆ ಸಿದ್ಧಪಡಿಸುವನು” ಎಂದು ಹೇಳಿದನು.
18 ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.
19 ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.
20 ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
21 ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.
22 ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
23 ತನ್ನ ಯಾಜಕಸೇವೆಯ ಸರದಿಯು ಮುಗಿದ ಮೇಲೆ ಜಕರೀಯನು ಮನೆಗೆ ಹಿಂತಿರುಗಿ ಹೋದನು.
24 ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ.
25 ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.
28 ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.
29 ದೇವದೂತನ ಮಾತನ್ನು ಕೇಳಿ ಬಹು ಗಲಿಬಿಲಿಗೊಂಡ ಮರಿಯಳು, “ಇದರ ಅರ್ಥವೇನಿರಬಹುದು?” ಎಂದು ಆಶ್ಚರ್ಯಪಟ್ಟಳು.
30 ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.
31 ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು.
32 ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.
33 ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.
34 ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು.
35 ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.
36 ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
37 ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.
38 ಮರಿಯಳು, “ನಾನು ಪ್ರಭುವಿನ ದಾಸಿ. ನೀನು ಹೇಳಿದಂತೆಯೇ ನನಗಾಗಲಿ!” ಅಂದಳು. ಬಳಿಕ ದೇವದೂತನು ಹೊರಟುಹೋದನು.
39 ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು.
40 ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.
41 ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ
42 ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.
43 ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ!
44 ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.
45 ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.
46 ಆಗ ಮರಿಯಳು,
47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ.
48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ.
49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ.
50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.
51 ಆತನು ತನ್ನ ಭುಜಬಲವನ್ನು ತೋರಿ
52 ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ
53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ
54 ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ
55 ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.
56 ಮರಿಯಳು ಸುಮಾರು ಮೂರು ತಿಂಗಳ ಕಾಲ ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂತಿರುಗಿದಳು.
57 ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು.
58 ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
59 ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.
60 ಆದರೆ ಮಗುವಿನ ತಾಯಿ, “ಇಲ್ಲ! ಆತನಿಗೆ ‘ಯೋಹಾನ’ ಎಂಬ ಹೆಸರಿಡಬೇಕು” ಎಂದು ಹೇಳಿದಳು.
61 ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು.
62 ಬಳಿಕ ಅವರು ಅವನ ತಂದೆಗೆ ಸನ್ನೆಮಾಡಿ, “ಆತನಿಗೆ ಯಾವ ಹೆಸರಿಡಬೇಕು?” ಎಂದು ಕೇಳಿದರು.
63 ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.
64 ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು.
65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.
66 ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.
67 ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:
68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
69 ತನ್ನ ಸೇವಕನಾದ ದಾವೀದನ ಮನೆತನದಿಂದ
70 ಇದನ್ನು ಆತನು ಪೂರ್ವಕಾಲದ
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.
78 “ನಮ್ಮ ದೇವರ ಮಹಾಕರುಣೆಯಿಂದ
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
80 ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.