Números 23

KAN2010

1 ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು.

2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ,

3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.

4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.

5 ಆಗ ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ತಿರುಗಿಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.

6 ಬಿಳಾಮನು ಬಾಲಾಕನ ಬಳಿಗೆ ತಿರುಗಿಬಂದಾಗ ಬಾಲಾಕನು ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನೊಡನೆ ನಿಂತಿದ್ದರು.

7 ಆಗ ಬಿಳಾಮನು ಹೀಗೆ ಹೇಳಿದನು:

8 ಆದರೆ ದೇವರು ಅವರನ್ನು ಆಶೀರ್ವದಿಸಿರುವಾಗ

9 ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು;

10 ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು;

11 ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು.

12 ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.

13 ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು.

14 ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.

15 ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.

16 ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹೋಗಿ ಹೀಗೆ ಹೇಳಬೇಕು” ಅಂದನು.

17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.

18 ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು,

19 ದೇವರು ಮನುಷ್ಯನಲ್ಲ;

20 ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು;

21 ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ.

22 ದೇವರು ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.

23 ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ.

24 ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು.

25 ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ” ಎಂದು ಹೇಳಿದನು.

26 ಅದಕ್ಕೆ ಬಿಳಾಮನು, “ಯೆಹೋವನು ಹೇಳುವುದನ್ನೇ ನಾನು ಮಾಡುತ್ತೇನೆ ಎಂದು ನಾನು ನಿನಗೆ ಮೊದಲೇ ಹೇಳಲಿಲ್ಲವೆ?” ಅಂದನು.

27 ಆಮೇಲೆ ಬಾಲಾಕನು ಬಿಳಾಮನಿಗೆ, “ಸರಿ, ಇನ್ನೊಂದು ಸ್ಥಳಕ್ಕೆ ಬಾ. ಒಂದುವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷೆಪಡಬಹುದು” ಎಂದು ಹೇಳಿದನು.

28 ಬಾಲಾಕನು ಬಿಳಾಮನನ್ನು “ಪೆಗೋರ್” ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ.

29 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು” ಎಂದು ಹೇಳಿದನು.

30 ಬಾಲಾಕನು ಅವನ ಅಪ್ಪಣೆಯ ಮೇರೆಗೆ ಪ್ರತಿಯೊಂದನ್ನು ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಅರ್ಪಿಸಿದನು.

Ler em outra tradução

Comparar lado a lado