1 “ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.
2 ‘ನಮ್ಮ ದೇವರೇ, ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ’ ಎಂದು ಅವರು ಕಿರುಚುವರು.
3 ಆದರೆ ಇಸ್ರೇಲ್ ಒಳ್ಳೇದನ್ನು ನಿರಾಕರಿಸಿತು. ಆದ್ದರಿಂದ ಶತ್ರುಗಳು ಅವರನ್ನು ಓಡಿಸಿದರು.
4 ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.
7 ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.
8 “ಇಸ್ರೇಲ್ ನಾಶವಾಯಿತು.
9 ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು.
10 ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು.
11 “ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು.
12 ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ
13 ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ.
14 ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು.