1 ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.
2 ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”
3 ಯೆಹೋಶುವನು ದೂತನ ಮುಂದೆ ನಿಂತುಕೊಂಡಿದ್ದನು. ಅವನ ವಸ್ತ್ರವು ಮಲಿನವಾಗಿತ್ತು.
4 ಆಗ ಆ ದೂತನು ಪಕ್ಕದಲ್ಲಿ ನಿಂತಿದ್ದ ಬೇರೆ ದೂತರನ್ನುದ್ದೇಶಿಸಿ, “ಯೆಹೋಶುವನ ಮೇಲಿರುವ ಮೈಲಿಗೆ ವಸ್ತ್ರವನ್ನು ತೆಗೆಯಿರಿ” ಎಂದು ಹೇಳಿದನು. ಆಗ ದೂತನು ಯೆಹೋಶುವನಿಗೆ, “ನಾನು ನಿನ್ನ ದೋಷಗಳನ್ನು ತೊಳೆದುಬಿಟ್ಟಿರುವೆ. ಈಗ ನಾನು ನಿನಗೆ ಹೊಸ ಬಟ್ಟೆಗಳನ್ನು ಕೊಡುತ್ತೇನೆ” ಎಂದು ಹೇಳಿದನು.
5 ಆಗ ನಾನು, “ಅವನ ತಲೆಯ ಮೇಲೆ ಶುಚಿಯಾದ ಪೇಟವನ್ನಿಡಿರಿ” ಎಂದು ಹೇಳಿದಾಗ ಅವರು ಅವನಿಗೆ ಶುಭ್ರವಾದ ಪೇಟವನ್ನು ಇಟ್ಟರು. ಯೆಹೋವನ ದೂತನು ಅಲ್ಲಿ ನಿಂತಿದ್ದಾಗಲೇ ಅವನಿಗೆ ನಿರ್ಮಲವಾದ ಬಟ್ಟೆಗಳನ್ನು ಧರಿಸಲು ಕೊಟ್ಟರು.
6 ಆಗ ಯೆಹೋವನ ದೂತನು ಯೆಹೋಶುವನಿಗೆ ಹೀಗೆ ಹೇಳಿದನು.
7 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ,
8 ಪ್ರಧಾನ ಯಾಜಕನಾದ ಯೆಹೋಶುವನೇ,
9 ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು.
10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: